ಸ್ಮಶಾನದಲ್ಲಿ ನೇಣು ಬಿಗಿದು ಆತ್ಮಹತ್ಯೆ: ಪಡುಮಾರ್ನಾಡು ಗ್ರಾ.ಪಂ ಮಾಜಿ ಅಧ್ಯಕ್ಷ ಶ್ರೀನಾಥ್ ಸುವರ್ಣ ದುರಂತ ಅಂತ್ಯ

BIDIRE NEWS

​ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನಪ್ರಿಯ ನಾಯಕ ಹಾಗೂ ಮಾಜಿ ಅಧ್ಯಕ್ಷರಾಗಿದ್ದ ಶ್ರೀನಾಥ್ ಸುವರ್ಣ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ.

​ಮೂಲಗಳ ಪ್ರಕಾರ, ಶ್ರೀನಾಥ್ ಸುವರ್ಣ ಅವರು ಸ್ಮಶಾನದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ದಿಢೀರ್ ದುರಂತದಿಂದಾಗಿ ಪಡುಮಾರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ಮೂಡುಬಿದಿರೆ ಪರಿಸರದಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ.

ವ್ಯವಹಾರ ನಷ್ಟವೇ ಕಾರಣ?

​ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಶ್ರೀನಾಥ್ ಸುವರ್ಣ ಅವರು ಇತ್ತೀಚೆಗೆ ವ್ಯವಹಾರದಲ್ಲಿ ನಷ್ಟದಿಂದ ತೀವ್ರವಾಗಿ ಬಳಲುತ್ತಿದ್ದರು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

​ಶ್ರೀನಾಥ್ ಸುವರ್ಣ ಅವರು ಗ್ರಾ.ಪಂ. ಅಧ್ಯಕ್ಷರಾಗಿ ಮಾಡಿದ ಕೆಲಸಗಳಿಂದಾಗಿ ಜನಪ್ರಿಯರಾಗಿದ್ದರು. ಅವರ ನಿಧನಕ್ಕೆ ಸ್ಥಳೀಯ ರಾಜಕೀಯ ಮುಖಂಡರು ಹಾಗೂ ಗ್ರಾಮಸ್ಥರು ಆಘಾತ ವ್ಯಕ್ತಪಡಿಸಿದ್ದಾರೆ.

​ಮೃತರು ತಾಯಿ ಮತ್ತು ಪತ್ನಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.