ಮೂಡುಬಿದಿರೆ: ಕೇರಳದ ತ್ರಿಶೂರ್ನಲ್ಲಿ ನಡೆದ ದಕ್ಷಿಣ ಭಾರತ ಅಂತರ್ ರಾಜ್ಯ ಅಸ್ಮಿತಾ ಖೇಲೋ ಇಂಡಿಯಾ ಮಹಿಳಾ ವೇಟ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಮಹಿಳಾ ತಂಡವು ಸಮಗ್ರ ಚಾಂಪಿಯನ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ಈ ಸಾಧನೆಯ ಮೂಲಕ, ಆಳ್ವಾಸ್ ತಂಡವು ಕರ್ನಾಟಕ ರಾಜ್ಯವನ್ನು ಮುಂಬರುವ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಪ್ರತಿನಿಧಿಸಲು ಅರ್ಹತೆ ಗಳಿಸಿದೆ. ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು ಈ ದಕ್ಷಿಣ ಭಾರತ ಮಟ್ಟದ ಪಂದ್ಯಾವಳಿಯಲ್ಲಿ ಒಟ್ಟು 7 ಪದಕಗಳನ್ನು ಗಳಿಸುವ ಮೂಲಕ ಗಮನಾರ್ಹ ಮೇಲುಗೈ ಸಾಧಿಸಿದರು. ಈ 7 ಪದಕಗಳಲ್ಲಿ 2 ಚಿನ್ನ, 2 ಬೆಳ್ಳಿ ಮತ್ತು 3 ಕಂಚಿನ ಪದಕಗಳು ಸೇರಿವೆ.
ಚಿನ್ನದ ಪದಕಗಳಿಸಿದವರು: ಶ್ರಾವ್ಯ-(48 ಕೆಜಿ), ಪಾವನಿ-(77 ಕೆಜಿ ಪ್ಲಸ್), ಬೆಳ್ಳಿಯ ಪದಕ ಗಳಿಸಿದವರು: ದೀಪಿಕಾ-(53 ಕೆಜಿ), ಕಾಂಚನ-(58 ಕೆಜಿ), ಕಂಚಿನ ಪದಕ ಗಳಿಸಿದವರು: ಪಲ್ಲವಿ-(44 ಕೆಜಿ), ಹಂಸವೇಣಿ-(63 ಕೆಜಿ), ಮಾನಸ-(77 ಕೆಜಿ)
ಸಾಧಕ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅದ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

