ಸ್ನೇಹಿತೆಯ ಕಣ್ಣೆದುರೇ ನದಿಗೆ ಹಾರಿ ಮೂಡುಬಿದಿರೆಯ ಯುವತಿ ಆತ್ಮಹತ್ಯೆ

BIDIRE NEWS

ಮೂಡುಬಿದಿರೆ: ಇಲ್ಲಿನ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಯುವತಿಯೋರ್ವಳು ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ನಡೆದಿದೆ.



ಘಟನೆಯ ವಿವರ:

ಮೂಡುಬಿದಿರೆ ಗಾಂಧಿನಗರ ಸಮೀಪದ ಕಡೆಪಲ್ಲ ನಿವಾಸಿ ನವ್ಯ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಮೂಡುಬಿದಿರೆಯ ಅಲಂಕಾರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರದಂದು ನವ್ಯ ತನ್ನ ನಿಡ್ಡೋಡಿ ಮೂಲದ ಸ್ನೇಹಿತೆಯ ಜೊತೆಗೆ ಗುರುಪುರ ನದಿ ತೀರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ನವ್ಯ ದಿಢೀರನೆ ನದಿಗೆ ಹಾರಿದ್ದಾರೆ. ಇದನ್ನು ಕಂಡು ಗಾಬರಿಗೊಂಡ ಸ್ನೇಹಿತೆ, ನವ್ಯರನ್ನು ರಕ್ಷಿಸಲು ಕೈ ಹಿಡಿದು ಎಳೆಯಲು ಪ್ರಯತ್ನಪಟ್ಟಿದ್ದಾರೆ. ಆದರೆ ಯತ್ನ ವಿಫಲವಾಗಿದ್ದು, ಈ ವೇಳೆ ಸ್ನೇಹಿತೆಯ ಕೈಗೆ ತೀವ್ರವಾದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.


ಮಿಥುನ್ ರೈ ಅವರಿಂದ ತುರ್ತು ಸ್ಪಂದನೆ:

ಘಟನೆ ನಡೆದ ವೇಳೆ ಆ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರು ತಕ್ಷಣ ಸ್ಪಂದಿಸಿದರು. ಕೂಡಲೇ ಸ್ಥಳೀಯರ ನೆರವಿನೊಂದಿಗೆ ನದಿಯಿಂದ ಶವವನ್ನು ಮೇಲಕ್ಕೆತ್ತಲು ಅಗತ್ಯವಿರುವ ತುರ್ತು ವ್ಯವಸ್ಥೆಗಳನ್ನು ಮಾಡಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

slider